ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ, ಕೊಕ್ಕಡ, ದಕ್ಷಿಣ ಕನ್ನಡ - 574198, ದಕ್ಷಿಣ ಕನ್ನಡ .
Sowthadka Sri Mahaganapathi Temple, Kokkada, Dakshina Kannada - 574198, Dakshina Kannada District [TM000056]
×
Temple History
ಸ್ಥಳ ಪುರಾಣ
ಸುಮಾರು ೮೦೦ ವರ್ಷಗಳ ಹಿಂದೆ ಈ ಪ್ರದೇಶದ ಸಮೀಪದಲ್ಲಿ ರಾಜವಂಶಕ್ಕೊಳಪಟ್ಟ ದೇವಾಲಯವು ಸಂಗ್ರಾಮವೊAದರಲ್ಲಿ ಅರಸೊತ್ತಿಗೆ ನಾಶವಾಗಿ ದೇವಾಲಯ ಧ್ವಂಸವಾಗಿತ್ತು. ಈ ದೇವಾಲಯದಲ್ಲಿ ಪೂಜಿಸಲಾಗುತ್ತಿದ್ದ ಈ ಗಣಪತಿ ವಿಗ್ರಹವು ದನಗಳನ್ನು ಕಾಯುತ್ತಿದ್ದ ಗೋಪಾಲ ಬಾಲಕರಿಗೆ ಗೋಚರವಾಯ್ತು. ಈ ಬಾಲಕರೆಲ್ಲರೂ ಸೇರಿಕೊಂಡು ಗಣಪತಿ ವಿಗ್ರಹವನ್ನು ಎತ್ತಿಕೊಂಡು ದಾರಿಯುದ್ದಕ್ಕೂ ಭಜನೆ ಪೂಜೆಗಳನ್ನು ಮಾಡುತ್ತಾ ಈಗ ಇರುವ ಮರದ ...ಸುಮಾರು ೮೦೦ ವರ್ಷಗಳ ಹಿಂದೆ ಈ ಪ್ರದೇಶದ ಸಮೀಪದಲ್ಲಿ ರಾಜವಂಶಕ್ಕೊಳಪಟ್ಟ ದೇವಾಲಯವು ಸಂಗ್ರಾಮವೊAದರಲ್ಲಿ ಅರಸೊತ್ತಿಗೆ ನಾಶವಾಗಿ ದೇವಾಲಯ ಧ್ವಂಸವಾಗಿತ್ತು. ಈ ದೇವಾಲಯದಲ್ಲಿ ಪೂಜಿಸಲಾಗುತ್ತಿದ್ದ ಈ ಗಣಪತಿ ವಿಗ್ರಹವು ದನಗಳನ್ನು ಕಾಯುತ್ತಿದ್ದ ಗೋಪಾಲ ಬಾಲಕರಿಗೆ ಗೋಚರವಾಯ್ತು. ಈ ಬಾಲಕರೆಲ್ಲರೂ ಸೇರಿಕೊಂಡು ಗಣಪತಿ ವಿಗ್ರಹವನ್ನು ಎತ್ತಿಕೊಂಡು ದಾರಿಯುದ್ದಕ್ಕೂ ಭಜನೆ ಪೂಜೆಗಳನ್ನು ಮಾಡುತ್ತಾ ಈಗ ಇರುವ ಮರದ ಬುಡದಲ್ಲಿ ಕಾಟುಕಲ್ಲುಗಳ ಮಧ್ಯೆ ಇಟ್ಟು ತಾವು ಬೆಳೆಸುತ್ತಿರುವ ಸೌತೆ ಮಿಡಿಗಳನ್ನು ಪ್ರತಿ ದಿನ ನೈವೇದ್ಯವನ್ನಾಗಿ ಅರ್ಪಿಸಿ ಭಜನೆ ಪೂಜೆಗಳನ್ನು ಮಾಡತೊಡಗಿದರು. ಅಂದಿನಿAದ ಈ ಕ್ಷೇತ್ರಕ್ಕೆ ಸೌತಡ್ಕ ಎಂದು ಹೆಸರು ಬಂತು.
(ಸೌತೆ ಅಡ್ಕ : ಅಡ್ಕ ಎಂದರೆ ಬಯಲು ಎಂದರ್ಥ).
ದೇವಸ್ಥಾನಗಳು ವಾಸ್ತು ಶಿಲ್ಪಕ್ಕನುಗುಣವಾಗಿ ಗೋಪುರ ಗರ್ಭ ಗುಡಿಗಳನ್ನು ರಚಿಸಿ ಪೂರ್ವಾಭಿಮುಖವಾಗಿ ದೇವರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವ ಪೂರ್ವ
ಸಂಪ್ರದಾಯ ನಿಯಮವಿದ್ದು , ಸೌತಡ್ಕ ಗಣಪನು ಈ ಎಲ್ಲಾ ಸಂಪ್ರದಾಯಗಳನ್ನು ತಿರಸ್ಕರಿಸಿ, ಪ್ರಕೃತಿಯ ಸುಂದರ ತಾಣದಲ್ಲಿ ಆಗ್ನೇಯ ಮುಖವಾಗಿ, ಬಯಲೇ .
ಆಲಯವಾಗಿರಿಸಿಕೊಂಡು ಬಡವ ಶ್ರೀಮಂತರೆAಬ ತಾರತಮ್ಯವಿಲ್ಲದೆ, ಜಾತಿ, ಮತ ಬೇಧವೆಣಿಸದೆ ಮಾನವರಿಗೂ, ಸಕಲ ಜೀವ ರಾಶಿಗಳಿಗೂ ಅಭಯ ಹಸ್ತನಾಗಿ ಹಗಲು ರಾತ್ರಿ ಅನುಗ್ರಹಿಸುತ್ತಾ ರಕ್ಷಿಸಿಕೊಂಡು ಬರುತ್ತಿರುವುದು ಸೌತಡ್ಕ ಕ್ಷೇತ್ರದ ಮಹತ್ವ ಮೂಡಿಸುವ ವಿಶಿಷ್ಟ ಸಂಪ್ರದಾಯವಾಗಿರುತ್ತದೆ
ಹಿಂದೆ ಈ ಪರಿಸರದ ಶ್ರೀಮಂತ ಬ್ರಾಹ್ಮಣ ಭಕ್ತರೊಬ್ಬರು ಗಣೇಶನಿಗೆ ದೇವಸ್ಥಾನ
ನಿರ್ಮಿಸಲು ತೀರ್ಮಾನಿಸಿ ಕೆಲಸ ಪ್ರಾರಂಭ ಮಾಡುವಷ್ಟರಲ್ಲಿ ಗಣಪತಿಯು ದನ ಕಾಯುವ ಹುಡುಗನ ರೂಪದಲ್ಲಿ ಆ ಬ್ರಾಹ್ಮಣನಿಗೆ ಕನಸಿನಲ್ಲಿ ಕಾಣಿಸಿಕೊಂಡು ದೇಗುಲ ನಿರ್ಮಿಸುವುದಾದರೆ ಅದರ ಗೋಪುರವು ರಾತ್ರಿ ಬೆಳಗಾಗುದರೊಳಗೆ ತಂದೆಯಾದ ಕಾಶಿ ವಿಶ್ವನಾಥನಿಗೆ ಕಾಣುವಷ್ಟು ಎತ್ತರದಲ್ಲಿರಬೇಕೆಂದು ಕಟ್ಟಾಜ್ಞೆ ನೀಡಿರುವುದರಿಂದ ಆ ಬ್ರಾಹ್ಮಣನಿಗೆ ಆ ಸವಾಲನ್ನು ಎದುರಿಸಲು ತೀರ ಅಸಾಧ್ಯವೆಂದು ಮನಗಂಡು ದೇಗುಲ ನಿರ್ಮಾಣದ ಯೋಜನೆಯನ್ನು ಕೈ ಬಿಡಲಾಯಿತು. ಕೆಲವು ಸಮಯಗಳ ಹಿಂದೆ ಭಕ್ತಾಧಿಗಳೆಲ್ಲರೂ ಸೇರಿ ಜ್ಯೋತಿಷ್ಯರನ್ನು ಕರೆಸಿ ಅಷ್ಟಮಂಗಲ ಪ್ರಶ್ನೆಯಲ್ಲಿ ಗುಡಿಕಟ್ಟುವ ಬಗ್ಗೆ ವಿಮರ್ಶಿಸಿದಾಗ, ಗುಡಿ ಗೋಪುರ ಕಟ್ಟುವುದು ದೇವರಿಗೆ ಮನಸ್ಸಿಲ್ಲವೆಂದು , ಯಾವುದೇ ರೀತಿಯ ಬಂಧನಕ್ಕೆ ಅವಕಾಶ ನೀಡದೇ ಸಕಲ ಜೀವರಾಶಿಗಳಿಗೂ ಸ್ವ - ಇಚ್ಛೆಯಂತೆ ಮುಕ್ತ ಪ್ರವೇಶಕ್ಕೆ ಅವಕಾಶ ಕಾದಿರಿಸಿಕೊಂಡು ಬರತಕ್ಕದೆಂದು ತಿಳಿದು ಬಂದಿರುವುದರಿAದ ಗುಡಿಕಟ್ಟುವ ಆಲೋಚನೆಯನ್ನು ಅಲ್ಲಿಗೆ ಕೈ ಬಿಡಲಾಯಿತು . ಹಾಗಾಗಿ ಭಕ್ತರು ಹಾಗೂ ತನ್ನ ನಡುವೆ ಯಾವುದೇ ಗೋಡೆ, ಬಾಗಿಲುಗಳ ಅಡ್ಡಿ ಇರಬಾರದೆಂಬ ಗಣೇಶನ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ.
ಅಪಟಲ ಪ್ರೇಮ ಪಟಲಮ್ (ಮನೆಯೊಲ್ಲದವನ ಪ್ರೀತಿಯ ನೆಲೆ) ಎಂದು ಕವಿಗಳು ವರ್ಣಿಸಿರುವಂತೆ, ಗಣೇಶನು ಯಾವುದೇ ಆಡಂಬರಗಳನ್ನು ಸ್ವೀಕರಿಸುವುದಿಲ್ಲ ಪ್ರಕೃತಿಯ ಮಡಿಲಲ್ಲಿ ಬೆಳೆದು ನಿಂತಿರುವ ಗಿಡ ಮರಗಳ ನೆರಳೇ ಆಸರೆ, ತಂಪಾದ ವನ ಸಿರಿಯ ಮಧ್ಯೆ ಚಿಲಿಪಿಲಿಗುಟ್ಟುವ ಪಕ್ಷಿಗಳ ಹಾಡು, ಗಾನ ಕೋಗಿಲೆಯ ನಾದ ಸ್ವರ, ಹಚ್ಚ ಹಸುರಿನ ಎಲೆಗಳ ಮೇಲೆ ಸೂರ್ಯ ಕಿರಣಕ್ಕೆ ಚಿನ್ನದ ಮೊಗ್ಗೆಯಂತೆ ಮಿನುಗುವ ಇಬ್ಬನಿಯ ತುಣುಕುಗಳು, ಸುತ್ತಲಿನ ಬಯಲಿನಲ್ಲಿ ಸಂತಸದಿ ಕುಣಿದಾಡುತ್ತಿರುವ ಗೋವುಗಳು, ಹೀಗೆ ಹತ್ತು ಹಲವು ಪ್ರಕೃತಿ ಸೌಂದರ್ಯ ರಾಶಿಗಳ ಮಧ್ಯೆ ಗೋಪಾಲ ಬಾಲಕರು ನೈವೇಧ್ಯವಾಗಿ ತಂದೊಪ್ಪಿಸುವ ಸೌತೆ ಮಿಡಿಗಳನ್ನು ಸ್ವೀಕರಿಸುತ್ತಾ ಸಂತಸದಿAದ ನೆಲೆಯಾಗಿರುವ ಗಣೇಶನು ಸೌತಡ್ಕ ಪುಣ್ಯ ಕ್ಷೇತ್ರದಲ್ಲಿ ಹೊರತು ಬೇರೆಲ್ಲಿಯೂ ಕಾಣಸಿಗಲಾರದು.
ಸಾಹಿತ್ಯದ ಹಿನ್ನೆಲೆ
ಸುಮಾರು ೮೦೦ ವರ್ಷಗಳ ಹಿಂದೆ ಈ ಪ್ರದೇಶದ ಸಮೀಪದಲ್ಲಿ ರಾಜವಂಶಕ್ಕೊಳಪಟ್ಟ ದೇವಾಲಯವು ಸಂಗ್ರಾಮವೊAದರಲ್ಲಿ ಅರಸೊತ್ತಿಗೆ ನಾಶವಾಗಿ ದೇವಾಲಯ ಧ್ವಂಸವಾಗಿತ್ತು. ಈ ದೇವಾಲಯದಲ್ಲಿ ಪೂಜಿಸಲಾಗುತ್ತಿದ್ದ ಈ ಗಣಪತಿ ವಿಗ್ರಹವು ದನಗಳನ್ನು ಕಾಯುತ್ತಿದ್ದ ಗೋಪಾಲ ಬಾಲಕರಿಗೆ ಗೋಚರವಾಯ್ತು. ಈ ಬಾಲಕರೆಲ್ಲರೂ ಸೇರಿಕೊಂಡು ಗಣಪತಿ ವಿಗ್ರಹವನ್ನು ಎತ್ತಿಕೊಂಡು ದಾರಿಯುದ್ದಕ್ಕೂ ಭಜನೆ ಪೂಜೆಗಳನ್ನು ಮಾಡುತ್ತಾ ಈಗ ಇರುವ ಮರದ ...ಸುಮಾರು ೮೦೦ ವರ್ಷಗಳ ಹಿಂದೆ ಈ ಪ್ರದೇಶದ ಸಮೀಪದಲ್ಲಿ ರಾಜವಂಶಕ್ಕೊಳಪಟ್ಟ ದೇವಾಲಯವು ಸಂಗ್ರಾಮವೊAದರಲ್ಲಿ ಅರಸೊತ್ತಿಗೆ ನಾಶವಾಗಿ ದೇವಾಲಯ ಧ್ವಂಸವಾಗಿತ್ತು. ಈ ದೇವಾಲಯದಲ್ಲಿ ಪೂಜಿಸಲಾಗುತ್ತಿದ್ದ ಈ ಗಣಪತಿ ವಿಗ್ರಹವು ದನಗಳನ್ನು ಕಾಯುತ್ತಿದ್ದ ಗೋಪಾಲ ಬಾಲಕರಿಗೆ ಗೋಚರವಾಯ್ತು. ಈ ಬಾಲಕರೆಲ್ಲರೂ ಸೇರಿಕೊಂಡು ಗಣಪತಿ ವಿಗ್ರಹವನ್ನು ಎತ್ತಿಕೊಂಡು ದಾರಿಯುದ್ದಕ್ಕೂ ಭಜನೆ ಪೂಜೆಗಳನ್ನು ಮಾಡುತ್ತಾ ಈಗ ಇರುವ ಮರದ ಬುಡದಲ್ಲಿ ಕಾಟುಕಲ್ಲುಗಳ ಮಧ್ಯೆ ಇಟ್ಟು ತಾವು ಬೆಳೆಸುತ್ತಿರುವ ಸೌತೆ ಮಿಡಿಗಳನ್ನು ಪ್ರತಿ ದಿನ ನೈವೇದ್ಯವನ್ನಾಗಿ ಅರ್ಪಿಸಿ ಭಜನೆ ಪೂಜೆಗಳನ್ನು ಮಾಡತೊಡಗಿದರು. ಅಂದಿನಿAದ ಈ ಕ್ಷೇತ್ರಕ್ಕೆ ಸೌತಡ್ಕ ಎಂದು ಹೆಸರು ಬಂತು.