ಈ ಹಿಂದೆ ರಾವಣನ ಬಂದುವಾದ ಖರನೆಂಬ ಮಹಾಸುರನು ಶಿವನಿಗೆ ಸಮಾನವಾದ ಪರಾಕ್ರಮ ಉಳ್ಳವನಾಗಿ ದಂಡಕಾರಣ್ಯದಲ್ಲಿ ವಾಸವಾಗಿದ್ದನು. ಆತನ ಪತ್ನಿಯಾದ ಕುಂಬಮುಖಿಯಿಂದಲೂ ತಂಗಿಯಾದ ಶೂರ್ಪನಖಿಯಿಂದಲೂ, ದೂಷಣ, ತ್ರಿಶಿರಾದಿ ಅನುಚರರಿಂದಲೂ, ಕೂಡಿಕೊಂಡು ತನ್ನ ಅಣ್ಣನಾದ ರಾವಣನ ಅಪ್ಪಣೆಯಂತೆ ಲಂಕಾನಗರಿಗೆ ಉತ್ತರ ದಿಕ್ಕಿನ ಈ ದಂಡಕಾರಣ್ಯವನ್ನು ಪಾಲಿಸುತ್ತಿದ್ದನು.
ಈ ಖರಾಸುರನು ರಾಕ್ಷಸನಾಗಿದ್ದರೂ, ಧರ್ಮಿಷ್ಠನೂ, ಪರಾಕ್ರಮಿಯೂ ಆಗಿದ್ದನಲ್ಲದೇ ಸದಾ ಕಾಲವು ತನ್ನ ಕುಲದೇವನಾದ ಶಂಕರನನ್ನು ಪೂಜಿಸುತ್ತ ಇರುತ್ತಿದ್ದನು. ಈತನ ಪತ್ನಿಯಾದ ಕುಂಭಮುಖಿಯೂ ಸಹ ಪತಿವೃತಾ ಪಾರಾಯಣಳು,...